Friday, November 16, 2007

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು

ರಚನೆ: ಹುಯಿಲಗೋಳ ನಾರಾಯಣರಾವ್
ಸಂಗೀತ: ಪಿ. ಕಾಳಿಂಗರಾವ್

ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು
ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು.

ರಾಜನ್ಯರಿಪು ಪರಶುರಾಮನಮ್ಮನ ನಾಡು
ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು
ಓಜೆಯಿಂ ಮೆರೆದರಸುಗಳ ಸಾಹಸದ ಸೂಡು
ತೇಜವನು ನಮಗೀವ ವೀರವೃಂದದ ಬೀಡು.

ಲೆಕ್ಕಿಗಮಿತಾಕ್ಷರರು ಬೆಳೆದು ಮೆರೆದಿಹ ನಾಡು
ಜಕ್ಕಣನ ಶಿಲ್ಪಕಲೆಯಚ್ಚರಿಯ ಕರುಗೋಡು
ಚೊಕ್ಕಮತಗಳ ಸಾರಿದವರಿಗಿದು ನೆಲೆವೀಡು
ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು.

ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು
ಕಾವೇರಿ ಗೋದೆಯರು ಮೈದೊಳೆವ ನಲುನಾಡು
ಆವಗಂ ಸ್ಪೂರ್ತಿಸುವ ಕಬ್ಬಿಗರ ನಡೆಮಾಡು
ಕಾವ ಗದುಗಿನ ವೀರನಾರಾಯಣನ ಬೀಡು.

ಜಯ ಭಾರತ ಜನನಿಯ ತನುಜಾತೆ

ರಚನೆ: ಕುವೆಂಪು
ಸಂಗೀತ: ಸಿ.ಅಶ್ವತ್ಥ್

ಜಯ ಭಾರತ ಜನನಿಯ ತನುಜಾತೆ
ಜಯ ಹೇ ಕರ್ನಾಟಕ ಮಾತೆ
ಜಯ ಸುಂದರ ನದಿವನಗಳ ನಾಡೇ
ಜಯ ಹೇ ರಸ ಋಷಿಗಳ ಬೀಡೆ.
ಭೂದೇವಿಯ ಮಕುಟದ ನವಮಣಿಯೆ
ಗಂಧದ ಚಂದದ ಹೊನ್ನಿನ ಗಣಿಯೆ
ರಾಘವ ಮಧುಸೂಧನರವತರಿಸಿದ


ಭಾರತ ಜನನಿಯ ತನುಜಾತೆ !
ಜಯ ಹೇ ಕರ್ನಾಟಕ ಮಾತೆ !!


ಜನನಿಯ ಜೋಗುಳ ವೇದದ ಘೋಶ,
ಜನನಿಗೆ ಜೀವವು ನಿನ್ನಾವೇಶ,
ಹಸುರಿನ ಗಿರಿಗಳ ಸಾಲೇ,
ನಿನ್ನಯ ಕೊರಳಿನ ಮಾಲೆ,
ಕಪಿಲ ಪತಂಜಲ ಗೌತಮ ಜಿನನುತ,


ಭಾರತ ಜನನಿಯ ತನುಜಾತೆ !
ಜಯ ಹೇ ಕರ್ನಾಟಕ ಮಾತೆ !!


ಶಂಕರ ರಾಮಾನುಜ ವಿದ್ಯಾರಣ್ಯ,
ಬಸವೇಶರರಿಹ ದಿವ್ಯಾರಣ್ಯ,
ರನ್ನ ಶಡಕ್ಷರಿ ಪೊನ್ನ,
ಪಂಪ ಲಕುಮಿಪತಿ ಜನ್ನ,
ಕಬ್ಬಿಗರುದಿಸಿದ ಮಂಗಳ ಧಾಮ,
ಕವಿ ಕೋಗಿಲೆಗಳ ಪುಣ್ಯಾರಾಮ,
ನಾನಕ ರಾಮಾನಂದ ಕಬೀರರ


ಭಾರತ ಜನನಿಯ ತನುಜಾತೆ !
ಜಯ ಹೇ ಕರ್ನಾಟಕ ಮಾತೆ !!



ತೈಲಪ ಹೊಯ್ಸಳರಾಳಿದ ನಾಡೇ
ಕಂಕಣ ಜಕಣರ ನಚ್ಚಿನ ಬೀಡೆ
ಕೃಷ್ಣ ಶರಾವತಿ ತುಂಗ
ಕಾವೇರಿಯ ವರ ರಂಗ
ಚೈತನ್ಯ ಪರಮಹಂಸ ವಿವೇಕರ


ಭಾರತ ಜನನಿಯ ತನುಜಾತೆ !
ಜಯ ಹೇ ಕರ್ನಾಟಕ ಮಾತೆ !!

ಸರ್ವ ಜನಾಂಗದ ಶಾಂತಿಯ ತೋಟ
ರಸಿಕರ ಕಂಗಳ ಸೆಳೆಯುವ ನೋಟ
ಹಿನ್ದು ಕ್ರೈಸ್ತ ಮುಸಲ್ಮಾನ
ಪರತಿಕ ಜೈನರುಗ್ಯಾನ

ಜನಕನ ಹೋಲುವ ದೊರೆಗಳ ಧಾಮ
ಗಾಯಕ ವೈನಿಕರಾರಾಮ
ಕನ್ನದ ನುಡಿ ಕುಣಿದಾಡುವ ಗೇಹ
ಕನ್ನದ ತಾಯಿಯ ಮಕ್ಕಳ ದೇಹ


ಭಾರತ ಜನನಿಯ ತನುಜಾತೆ !
ಜಯ ಹೇ ಕರ್ನಾಟಕ ಮಾತೆ !!

ಹಚ್ಚೇವು ಕನ್ನಡದ ದೀಪ

ಹಚ್ಚೇವು ಕನ್ನಡದ ದೀಪ
ರಚನೆ: ಡಿ.ಎಸ್. ಕರ್ಕಿ
ಸಂಗೀತ: ಸಿ. ಅಶ್ವತ್ಠ್

ಹಚ್ಚೇವು ಕನ್ನಡದ ದೀಪ
ಕರುನಾಡದೀಪ ಸಿರಿನುಡಿಯದೀಪ
ಒಲವೆತ್ತಿ ತೋರುವಾ ದೀಪ | ಹಚ್ಚೇವು |
ಬಹುದಿನಗಳಿಂದ ಮೈಮರೆವೆಯಿಂದ
ಕೂಡಿರುವ ಕೊಳೆಯ ಕೊಚ್ಚೇವು
ಎಲ್ಲೆಲ್ಲಿ ಕನ್ನಡದ ಕಂಪು ಸೂಸ-
ಲಲ್ಲಲ್ಲಿ ಕರಣ ಚಾಚೇವು
ನಡು ನಾಡೆ ಇರಲಿ, ಗಡಿನಾಡೆ ಇರಲಿ
ಕನ್ನಡದ ಕಳೆಯ ಕಚ್ಚೇವು
ಮರತೇವು ಮರವ, ತೆರೆದೇವು ಮನವ, ಎರೆದೇವು ಒಲವ-ಹಿರಿ ನೆನಪ
ನರನರವನೆಲ್ಲ ಹುರಿಗೊಳಿಸಿ ಹೊಸೆದು ಹಚ್ಚೇವು ಕನ್ನಡದ ದೀಪ

ಕಲ್ಪನೆಯ ಕಣ್ಣು ಹರಿವನಕ ಸಾಲು
ದೀಪಗಳ ಬೆಳಕ ಬೀರೇವು
ಹಚ್ಚಿರುವ ದೀಪದಲಿ ತಾಯ ರೂಪ
ಅಚ್ಚಳಿಯದಂತೆ ತೋರೇವು
ಒಡಲೊಡಲ ಕೆಚ್ಚಿನಾ ಕಿಡಿಗಳನ್ನು
ಗಡಿನಾಡೆಚೆ ತೂರೇವು
ಹೊಮ್ಮಿರಲು ಪ್ರೀತಿ ಎಲ್ಲಿಯದು ಭೀತಿ? -ನಾಡೊಲವೆ ನೀತಿ ಹಿಡಿ ನೆನಪ
ಮನೆಮನೆಗಳಲ್ಲಿ ಮನಮನಗಳಲ್ಲಿ ಹಚ್ಚೇವು ಕನ್ನಡದ ದೀಪ.

ಕರುನಾಡಿನವರಿವ ನೆರೆತೀವಿ ಭಾವ-
ದಲಿ ಜೀವನಾಡಿ ನುಡಿಸೇವು
ತೆರೆತೆರೆದ ಕಣ್ಣಿನಲಿ ನೇಹವೆರೆದು
ನವ ಜ್ಯೋತಿಯನ್ನೆ ಮುಡಿಸೇವು
ನಮ್ಮನ್ನವುಂಡು ಅನ್ಯಾಯಗೈಯು
ವಂಥವರ ಹುಚ್ಚ ಬಿಡಿಸೇವು
ಇಹುದೆಮಗೆ ಛಲವು, ಕನ್ನಡರ ಬಲವು ಕನ್ನಡದ ಒಲವು -ಹಿಡಿನೆನವು
ನಮ್ಮದೆಯ ಕೆಚ್ಚುನೆಚ್ಚುಗಳನೂಡಿ ಹಚ್ಚೇವು ಕನ್ನಡದ ದೀಪ.

ನಮ್ಮವರು ಗಳಿಸಿದಾ ಹೆಸರ ಉಳಿಸ-
ಲೆಲ್ಲಾರು ಒಂದುಗೂಡೇವು
ನಮ್ಮದೆಯ ಮಿಡಿಯುವೀ ಮಾತಿನಲ್ಲಿ
ಮಾತೆಯನು ಪೂಜೆ ಮಾಡೇವು
ನಮ್ಮುಸಿರು ತೀಡುವೀ ನಾಡಿನಲ್ಲಿ
ಮಾಂಗಲ್ಯಗೀತ ಹಾಡೇವು
ತೊರೆದೇವು ಮರುಳ, ಕಡೆದೇವು ಇರುಳ ಪಡೆದೇವು ತಿರುಳ -ಹಿಡಿನೆನಪ
ಕರುಳೆಂಬ ಕುಡಿಗೆ ಮಿಂಚನ್ನೆ ಮುಡಿಸಿ ಹಚ್ಚೇವು ಕನ್ನಡದ ದೀಪ.